Breaking News

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬೆಳಗಾವಿ ಅಧಿವೇಶನ ಆದ್ಯತೆ ನೀಡಲಾಗುವುದು : ಸಭಾಪತಿ ಕೆ.ಬಿ. ಕೋಳಿವಾಡ*

ಬೆಳಗಾವಿ- ನಾಳೆಯಿಂದ ೨೪ರ ವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಮಹಾದಾಯಿ ನದಿ ನೀರಿನ ಹಂಚಿಕೆ, ಕಬ್ಬು ಬೆಳೆಗಾರರ ಸಮಸ್ಯೆ, ನಂಜುಂಡಪ್ಪ ವರದಿಯ ಅನುಷ್ಠಾನದ ಸತ್ಯಾಸತ್ಯತೆಯ ಸೇರಿದಂತೆ ಅನೇಕ ಜಲ್ವಂತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಕಾರ್ಯ ನಡೆಯಬೇಕಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದ್ದಾರೆ.

ಬೆಳಗಾವಿಯಲ್ಲಿ ಇಂದು ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಕಲ್ಯಾಣ ಕಾರ್ಯಕ್ರಮ ಯೋಜನೆಗಳ ಬಗ್ಗೆ ಸದನದಲ್ಲಿ ಸಮಾಲೋಚನೆ ನಡೆಯಬೇಕು ಎಂದು ಹೇಳಿದರು.

ಬೆಳಗಾವಿ ಸುವರ್ಣ ವಿಧಾನಸೌಧ ವರ್ಷದ ಉದ್ದಕ್ಕೂ ಕಾರ್ಯಪ್ರವೃತ್ತವಾಗಬೇಕು. ಇದಕ್ಕೆ ಸರ್ಕಾರದ ಅನೇಕ ಇಲಾಖೆಗಳ ವರ್ಗಾವಣೆ ನಡೆಯಬೇಕು. ಇದರಿಂದ ಸೌಧದ ಸೂಕ್ತ ನಿರ್ವಹಣೆ ಹಾಗೂ ಆಡಳಿತ ಅನುಕೂಲ ವಾಗಲಿದೆ ಎಂದು ಮೇಲಿಂದ ಮೇಲೆ ಒತ್ತಾಯಿಸುತ್ತ ಬಂದಿದ್ದೇನೆ. ಆದರೆ, ಅದು ಇದುವರೆಗೂ ಈಡೇರದ ಬಗ್ಗೆ ನೋವಿದೆ ಎಂದು ಅವರು ಹೇಳಿದರು.

ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ ಆಗಬೇಕು. ಇದರಿಂದ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ವಸತಿ ಹಾಗೂ ಇತರೆ ಖರ್ಚುಗಳ ನಿಯಂತ್ರಣಕ್ಕೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.