Breaking News

ಮೇಯರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಎಂ ಭೇಟಿ- ನಾರಾಯಣಗೌಡ

ಬೆಳಗಾವಿ ರಾಜ್ಯೋತ್ಸವದಂದು ಎಂಇಎಸ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡ ಮೇಯರ್,ಸೇರಿದಂತೆ ಇತರ ಎಂಈಎಸ್ ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಒತ್ತಾಯಿಸಲು ಕೂಡಲೇ ಮುಖ್ಯಮಂತ್ರಿಗಳನ್ನು ಭೇಟಿಯಾಗುವದಾಗಿ ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡರು ತಿಳಿಸಿದ್ದಾರೆ ಬೆಳಗಾವಿಯಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರು ಮಾದ್ಯಮಗಳ ಜೊತೆ ಮಾತನಾಡಿ ಎಂಇಎಸ ವಿರುದ್ಧ ಕಿಡಿಕಾರಿದರು

ನಾಡದ್ರೋಹಿಗಳು ವಿರುದ್ಧ ಕ್ರಿಮಿನಲ್ ಕೇಸ ದಾಖಲಿಸಿ, ಕ್ರಮಕೈಗೊಳ್ಳಬೇಕು. ಕರಾಳ ದಿನ್ನದಲ್ಲಿ ಪಾಲ್ಗೊಂಡ ಮೇಯರ್, ಪಾಲಿಕೆ ಸದಸ್ಯರ ವಿರುದ್ಧ ಕ್ರಮವಾಗಬೇಕು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಒತ್ತಾಯಿಸುವೆ ಎಂದು ಹೇಳಿದರು

ಸ್ಥಳೀಯ ರಾಜಕೀಯ ಲಾಭಕ್ಕಾಗಿ ಜನಪ್ರತಿನಿಧಿಗಳು ಕನ್ನಡ ಬಲಿಕೊಡುತ್ತಿದ್ದಾರೆ ಹೀಗಾಗಿ ಪಾಲಿಕೆಯಲ್ಲಿ ಕನ್ನಡ ಮೇಯರ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ನಾರಾಯಣ ಗೌಡಾ ಆಕ್ರೋಶ ವ್ಯಕ್ತಪಡಿಸಿದರು
ಬೆಳಗಾವಿಯ ಸ್ಥಳೀಯ ರಾಜಕಾರಣಿಗಳು ಕದ್ದು ಮುಚ್ವಿ ಎಂಈಎಸ್ ಸಂಘಟನೆಯನ್ನು ಬೆಳೆಸುತ್ತಿದ್ದಾರೆ ಕನ್ನಡದ ಮೇಯರ್ ಆಗುವ ಸಾಧ್ಯತೆ ಇದ್ದರೂ ಅವರು ಅದನ್ನು ತಪ್ಪಿಸಿ ತಮ್ಮ ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ನಾರಾಯಣಗೌಡ ಆಕ್ರೋಶವ್ಯೆಕ್ತಪಡಿಸಿದರು
ಕನ್ನಡಿಗರಿಗೆ ಶೇ 80 ರಷ್ಟು ಮೀಸಲಾತಿಗೆ ಆಗ್ರಹಿಸಿ ಡಿಸೆಂಬರ ತಿಂಗಳಲ್ಲಿ ಬೆಂಗಳೂರಿನಲ್ಲಿ ಬೃಹತ್ತ ನ ಪ್ರತಿಭಟನಾ ರ್ಯಾಲಿ ನಡೆಯಲಿದೆ ಕರವೇ ಅಖಂಡ ಕರ್ನಾಟಕದ ಸಮಸ್ಯೆಗಳ ನಿವಾರಣೆಗೆ ನಿರಂತರ ಹೋರಾಟ ಮಾಡುತ್ತಿದೆ ಉತ್ತರ ಕರ್ನಾಟಕದ ಸಮಸ್ಯೆಗಳ ನಿವಾರಣೆಗೆ ಕರವೇ ಹಿಂದೆಯೂ ಹೋರಾಟ ಮಾಡಿದೆ ಮುಂದೆಯೂ ಮಾಡುತ್ತದೆ ಎಂದರು

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.