Breaking News

ಬಹಿರ್ದೆಸೆಗೆ ಹೋದಾಗ,ವಾಂತಿ..ಬೆಳಗಾವಿಯಲ್ಲಿ ಎಂಟು ವರ್ಷದ ಬಾಲಕಿಯ ಸಾವು

ಬೆಳಗಾವಿ- ಬಹಿರ್ದೆಸೆಗೆ ಹೋಗಿದ್ದ ಎಂಟು ವರ್ಷದ ಬಾಲಕಿಗೆ ಏಕಾ ಏಕಿ ವಾಂತಿ ಬೇಧಿ ಶುರುವಾಗಿ ಆಸ್ಪತ್ರೆಯಲ್ಲಿ ಈ ಬಾಲಕಿ ಸಾವನ್ನೊಪ್ಪಿದ ಘಟನೆ ಬೆಳಗಾವಿಯ ಉದ್ಯಮಬಾಗದ ಸ್ಲಂ ಪ್ರದೇಶದಲ್ಲಿ ನಡೆದಿದೆ.

ಎಂಟು ವರ್ಷದ ಅಶ್ವಿನಿ ಪರಶರಾಮ ಕಾಲೇರಿ ಎಂಬ ಬಾಲಕಿ ಇಂದು ಬಹಿರ್ದೆಸೆಗೆ ಹೋಗಿದ್ದಳು ಅವಳು ಮನೆಗೆ ಬರುತ್ತಿದ್ದಂತೆಯೇ ವಾಂತಿಬೇಧಿ ಶುರುವಾಗಿದ್ದರಿಂದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು .ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ.
ಈ ಬಾಲಕಿ ಬಹಿರ್ದೆಸೆಗೆ ಹೋದ ಸಂದರ್ಭದಲ್ಲಿ ವಿಷಪೂರಿತ ಕೀಟ ಕಚ್ಚಿರಬಹುದು,ಅಥವಾ ಈ ಬಾಲಕಿ ವಿಷಪೂರಿತ ಆಹಾರ ಸೇವಿಸಿರಬಹುದು ಎಂದು ಶಂಕಿಸಲಾಗಿದ್ದು ಉದ್ಯಮಬಾಗ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಿಪಿಐ ದಯಾನಂದ ಶೇಗುಣಶಿ ತನಿಖೆ ನಡೆಸಿದ್ದಾರೆ.

Check Also

ಶ್ರೀ ಮಹಾಲಕ್ಷ್ಮೀ ಜಾತ್ರೆ, ಭಂಡಾರ ಇಲ್ಲ….,ಬ್ಯಾನರ್ ಕೂಡಾ ಬ್ಯಾನ್….!!!

ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ …

Leave a Reply

Your email address will not be published. Required fields are marked *