ರಾಜ್ಯದಲ್ಲಿ ಬಿಜೆಪಿ ನಾಯಕರಿಂದ ಕಾನೂನು ಭಂಗ

ಬೆಳಗಾವಿ-ರಾಜ್ಯದಲ್ಲಿ ಬಿಜೆಪಿ ನಾಯಕರು ಕಾನೂನನ್ನು ಕೈಗೆತ್ತಿಕೊಂಡು ಕಾನೂನು ಭಂಗ ಮಾಡಿದ್ದಾರೆ ಓಟ್ ಬ್ಯಾಂಕ್ ಗೋಸ್ಕರ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ತ ಸದಸ್ಯ ಕಾಂಗ್ರೆಸ್ ಮುಖಂಡ ಉಗ್ರಪ್ಪ ಆರೋಪಿಸಿದ್ದಾರೆ

ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಉಗ್ರಪ್ಪ ರಾಜ್ಯದ ಬಿಜೆಪಿ ನಾಯಕರು ಗುಜರಾತ್ ಮಾಡೆಲ್ ಅನುಸರಿಸಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಬೆಂಬಲಿಗರು ಸಮಾಜದ ಸ್ವಾಸ್ಥ್ಯವನ್ನು ಕೆಡೆಸುತ್ತಾದ್ದಾರೆ ಓಟ್ ಬ್ಯಾಂಕ್ ಗೋಸ್ಕರ ಹಿಂದುಗಳನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಉಗ್ರಪ್ಪ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವ ಕಾರಣ ರಾಜ್ಯದಲ್ಲಿ ನಡೆದ ಎಲ್ಲ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದ್ದಾರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವದರಲ್ಲಿ ಯಾವುದೇ ಸಂದೇಹವಿಲ್ಲ ಕಾಂಗ್ರೆಸ್ ಏಳಿಗೆಯನ್ನು ಸಹಿಸದೇ ಹತಾಶ ರಾಗಿರುವ ಬಿಜೆಪಿ ನಾಯಕರು ಸಾವಿನ ಮನೆಯಲ್ಲಿ ರಾಜಕಾರಣ ಮಾಡುತ್ತಿದೆ ರಾಜ್ಯದ ಬಿಜೆಪಿ ನಾಯಕರಿಗೆ ಸೋಲು ಅರ್ಥವಾಗಿರುವ ಕಾರಣ ರಾಜ್ಯದಲ್ಲಿ ಹೇಗಾದರು ಮಾಡಿ ಅಧಿಕಾರಕ್ಕೆ ಬರುವ ದುಸ್ಸಹಾಸಕ್ಕೆ ಬಿಜೆಪಿ ಕೈ ಹಾಕಿದೆ ಎಂದು ಉಗ್ರಪ್ಪ ಆರೋಪಿಸಿದ್ದಾರೆ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಳಸಾ ಬಂಡೂರಿ,ಕಾವೇರಿ ಮತ್ತು ರೈತರ ಸಾಲದ ಬಗ್ಗೆ ಮಾತನಾಡುತ್ತಿಲ್ಲ ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ರೈತರ ಸಾಲ ಮನ್ನಾ ಮಾಡಿದ್ದಾರೆ ಬಿಜೆಪಿ ಮಾತ್ರ ರೈತರ ಸಾಲದ ಬಗ್ಗೆ ಮಾತನಾಡುತ್ತಿಲ್ಲ ಬಿಜೆಪಿಗೆ ರಾಜ್ಯದ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಉಗ್ರಪ್ಪ ಹೇಳಿದ್ದಾರೆ

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *