ಸಚಿವ ಉಮೇಶ್ ಕತ್ತಿ ವಿಧಿವಶ…!!!!!

ಸಚಿವ ಉಮೇಶ್ ಕತ್ತಿ ವಿಧಿವಶ…

ಬೆಂಗಳೂರು- ಅರಣ್ಯ ಸಚಿವ ಉಮೇಶ್ ಕತ್ತಿ ಅವರು ತೀಚ್ರ ಹೃದಾಯಾಘಾತದಿಂದ ಇಂದು ರಾತ್ರಿ ವಿಧಿವಶರಾಗಿದ್ದಾರೆ.

ಇಂದು ರಾತ್ರಿ 10-30 ಹಂಟೆಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು,ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ವೀವ್ರ ನಿಘಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಚಿವ ಉಮೇಶ ಕತ್ತಿ ನಿಧನರಾಗಿದ್ದಾರೆ.

ಈ ಹಿಂದೆಯೂ ಎರಡು ಬಾರಿ ಉಮೇಶ್ ಕತ್ತಿ ಅವರಿಗೆ ಲಘು ಹೃದಾಯಾಘಾತವಾಗಿತ್ತು.ಆದ್ರೆ ಇಂದು ರಾತ್ರಿ ಬಾತ್ ರೂಮ್ ಗೆ ಹೋಗಿದ್ದಾಗ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆತ್ಮೀಯ ಗೆಳೆಯರಾಗಿದ್ದ ಉಮೇಶ್ ಕತ್ತಿ ನೇರ ನುಡಿಯ ನಿಷ್ಠುರ ನಾಯಕರಾಗಿದ್ದರು.
ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಬೆಳಗಾವಿ ಜಿಲ್ಲೆಗೆ ಆಘಾತವನ್ನುಂಟು ಮಾಡಿದೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *