ವಿದ್ಯಾಶಂಕರ ಬೆಳಗಾವಿ ವಿಟಿಯು ನೂತನ ಕುಲಪತಿ…!!

ಬೆಳಗಾವಿ: ಬೆಳಗಾವಿ ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾಲಯದ ನೂತನ ಕುಲಪತಿಯನ್ನಾಗಿ ಡಾ. ವಿದ್ಯಾಶಂರ ಅವರನ್ನು ನೇಮಕ ಮಾಡಿ ವಿವಿ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.

ಹಿಂದಿನ ಕುಲಪತಿಯಾಗಿದ್ದ ಪ್ರೊ.ಕರಿಸಿದ್ದಪ್ಪ ಅವರ ಅಧಿಕಾರವಧಿ ಪೂರ್ಣಗೊಂಡಿತ್ತು. ಈ ಹಿನ್ನೆಲೆಯಲ್ಲಿ ವಿಟಿಯು ಕುಲಪತಿ ಹುದ್ದೆ ತೆರವುಗೊಂಡಿತ್ತು. ಹಾಗಾಗಿ, ನೂತನ ಕುಲಪತಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಶಿವಕುಮಾರ ಅವರು ರಾಜ್ಯಪಾಲರ ಹೆಸರಿನಲ್ಲಿ ಆದೇಶ ಹೊರಡಿಸಿದ್ದಾರೆ. ವಿದ್ಯಾಶಂಕರಅವರು ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *