Breaking News

ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವೆ- ವೀರುಪಾಕ್ಷಿ ಸಾಧುನವರ

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಸಾಧುನವರ ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು

ಬೆಳಗಾವಿಯ ಆರ್ ಟಿ ಓ ವೃತ್ತ ದಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಸಾವಿರಾರು ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು

ಜಿಲ್ಲಾ ಉಸ್ತೂವಾರಿ ಸಚಿವ ಸತೀಶ್ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳಕರ,ಅಶೋಕ ಪಟ್ಟಣ್ ,ಅಂಜಲಿ ನಿಂಬಾಳ್ಕರ್ ,ಫಿರೋಜ್ ಸೇಠ,ಮಹಾಂತೇಶ ಕೌಜಲಗಿ,ವಿನಯ ನಾವಲಗಟ್ಟಿ,ರಾಜು ಸೇಠ ಮೊದಲಾದವರು ಸಾಧುನವರಿಗೆ ಸಾಥ್ ನೀಡಿದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ಈ ಬಾರಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯೆಕ್ತ ಪಡಿಸಿದರು

ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದ್ದೇನೆ ಅವರೂ ತಮ್ಮ ಗೆಲುವಿಗೆ ಶ್ರಮಿಸುವದಾಗಿ ಹೇಳಿದ್ದಾರೆ ಇವತ್ತು ಅವರು ಬೇರೆ ಕೆಲಸದಲ್ಲಿ ಬ್ಯುಸಿ ಆಗಿರುವ ಕಾರಣ ನಾಮಪತ್ರ ಸಲ್ಲಿಸಲು ಬರಲಿಲ್ಲ ಎಂದು ಸಾಧುನವರ ಹೇಳಿದರು

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ರಮೇಶ್ ಜಾರಕೊಹೊಳಿಗೆ ಟಿಕೆಟ್ ತಪ್ಪಿದ್ದು ಅದು ಅವರ ಪಕ್ಷದ ಆಂತರಿಕ ವಿಚಾರ ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಆದರೆ ಈ ಬಾರಿ ಕಾಂಗ್ರೆಸ್ ಚಿಕ್ಕೋಡಿ ಮತ್ತು ಬೆಳಗಾವಿ ಎರಡೂ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯೆಕ್ತಪಡಿಸಿದರು

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.