Breaking News
Home / ಬೆಳಗಾವಿ ನಗರ / ಬಿ ಎಸ್ ವೈ ಗೆ ಬಿಗ್ ರೀಲೀಫ್..ಬಿಜೆಪಿ ವಲಯದಲ್ಲಿ ಸಂತಸ

ಬಿ ಎಸ್ ವೈ ಗೆ ಬಿಗ್ ರೀಲೀಫ್..ಬಿಜೆಪಿ ವಲಯದಲ್ಲಿ ಸಂತಸ

ಬೆಳಗಾವಿ -ಗಣಿ ಕಂಪನಿಗೆ ಪರವಾಣಿಗೆ ನೀಡಿದ್ದಕ್ಕೆ ಪ್ರೇರಣಾ ಟ್ರಸ್ಟ ಮೂಲಕ ಕಿಕ್ ಬ್ಯಾಕ್ ಪಡೆದ ಎಲ್ಲ ಐದು ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಆರೋಪಿಗಳನ್ನು ಸಿಬಿಐ ವಿಶೇಷ ಕೋರ್ಟ ಖುಲಾಸೆಗೊಳಿಸಿದ ಹಿನ್ನಲೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂತಸ ವ್ಯಕ್ತ ಪಡಿಸಿದರು

ಈ ಸಂಧರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಅಭಯ ಪಾಟೀಲ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ಕಂಡ ಮಹಾನ್ ಮುಖ್ಯಮಂತ್ರಿ ಅವರು ಮಾಡಿರುವ ಸಾಧನೆ ಮತ್ತು ಜನಪರ ಯೋಜನೆಗಳನ್ನು ನೋಡಿ ಸಹಿಸಲಾಗದೇ ಅವರ ಹೆಸರು ಕೆಡಿಸಲು ಕೆಲವರು ಸುಳ್ಳು ಆರೋಪ ಮಾಡಿದ್ದರು ಆದರೂ ನ್ಯಾಯಾಲಯ ಮಹತ್ವದ ತೀರ್ಪು ನಿಡುವದರ ಮೂಲಕ ಸತ್ಯವನ್ನು ಎತ್ತಿ ಹಿಡಿದಿದೆ ಎಂದರು

ಮಾಜಿ ಮುಖ್ಯಮಂತ್ರಿಗಳು ದೊಷ ಮುಕ್ತರಾಗಿರುವದರಿಂದ ಬಿಜೆಪಿ ಕಾರ್ಯಕರ್ತರಿಗೆ ಆನೆ ಬಲ ಬಂದಿದೆ ಈ ರಾಜ್ಯದ ಪ್ರಗತಿ ಹಾಗು ಎಲ್ಲ ವರ್ಗಗಳ ಕಲ್ಯಾಣ ಕೇವಲ ಯಡಿಯೂರಪ್ಪನವರಿಂದ ಮಾತ್ರ ಸಾಧ್ಯವಿದ್ದು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವದು ಗ್ಯಾರಂಟಿ ಎಂದು ಅಭಯ ಪಾಟೀ5ಲ ವಿಶ್ವಾಸ ವ್ಯೆಕ್ತ ಪಡಿಸಿದರು

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *