ಮಳೆಯಲ್ಲಿ ದರ್ಶನ ಪಡೆದ ಸಾವಿರಾರು ಭಕ್ತರು

ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ಸುರಿದ ಧಾರಾಕಾರ ಮಳೆ ನಡುವೆಯ ಭಕ್ತರು ಸರದಿ ಸಾಲಿನಲ್ಲಿ ನಿಂತು ಯಲ್ಲಮ್ಮ ದೇವಿ ದರ್ಶನ ಆಶೀರ್ವಾದ ಪಡೆದುಕೊಂಡರು.

ಬೆಳಗ್ಗೆಯಿಂದ ಬಿಸಿಲಿನ ವಾತಾವರಣ ಇತ್ತು. ಯಲ್ಲಮ್ಮ ದೇವಿ ದರ್ಶನಕ್ಕೆ ದೇಶದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಸಂಜೆ ಏಕಾಏಕಿ ಮಳೆ ಶುರುವಾಯಿತು. ಆದರೂ, ಭಕ್ತರು ಸ್ಥಳಬಿಟ್ಟು ಕದಲದೆ, ಮಳೆಯಲ್ಲಿ ನೆನೆಯುತ್ತಲೇ ಭಕ್ತರು ದೇವಿ ದರ್ಶನ ಪಡೆದಿದ್ದು ವಿಶೇಷವಾಗಿತ್ತು.ಮಳೆಯಿಂದಾಗಿ ವ್ಯಾಪಾರಸ್ಥರು ಪರದಾಡುವಂತಾಯಿತು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *